ಕಾಸರಗೋಡು : ಇಲಿ ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ವೆಳ್ಳರಿಕ್ಕುಂಡ್ ಆನಮಂಜಳ ನಿವಾಸಿ ಸತೀಶ್ ಎಂಬವರ ಪತ್ನಿ ದೀಪಾ (23) ಮೃತಪಟ್ಟ ಯುವತಿ. ನಾಟ್ಟಂಕಲ್ಲಿನ ಪದ್ಮನಾಭನ್ ಮತ್ತು ಬಿಂದು ಅವರ ಪುತ್ರಿಯಾದ ಈಕೆ ಪತಿ ಮಕ್ಕಳಾದ ಶ್ರೀದೀಪ್ತ ಮತ್ತು ಶ್ರೀಯಾಂ ದೇವ್ ಎಂಬಿವರನ್ನಗಲಿದ್ದಾರೆ.
ಐದು ದಿನಗಳ ಹಿಂದೆ ಪತಿಯ ಮನೆಯಲ್ಲಿ ಇಲಿ ವಿಷ ಸೇವಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಮೊದಲಿಗೆ ಪರಿಯಾರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಬಳಿಕ ಕೋಝಿಕ್ಕೋಡು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು.
ಹೆಚ್ಚಿನ ಅಪ್ಡೇಟ್ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments