ಬದಿಯಡ್ಕ : ಹಳದಿ ಕಾಮಾಲೆ (ಜಾಂಡಿಸ್) ಕಾಯಿಲೆಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಸಾವನ್ನಪ್ಪಿದ್ದಾರೆ. ನೀರ್ಚಾಲ್ ಸಮೀಪದ ಏಣಿಯರ್ಪಿನ ಹೇಮಚಂದ್ರ (36) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕ. ಕಳೆದ ಸುಮಾರು ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ರಾತ್ರಿ ಕೊನೆಯುಸಿರೆಳೆದರು.
ಮೃತ ಹೇಮಚಂದ್ರ ಅವರು ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು.ತಂದೆ ಗೋಪಾಲ ರಾವ್, ತಾಯಿ ಸರೋಜಿನಿ, ಪತ್ನಿ ಅಶ್ವಿನಿ, ಪುತ್ರಿ ನಿಹಾರಿಕಾ ಹಾಗೂ ಸಹೋದರಿ ಮಮತಾ ಅವರನ್ನು ಅಗಲಿದ್ದಾರೆ.
ಹೆಚ್ಚಿನ ಅಪ್ಡೇಟ್ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments