ಬದಿಯಡ್ಕ, : ಕಿಳಿಂಗಾರು ಎ.ಎಲ್ ಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಂಕರ ಡಿ ಅವರು ದ್ವಜಾರೋಹಣಗೈದರು. ಶಾಲಾ ವ್ಯವಸ್ಥಾಪಕರಾದ ಕೆ.ಎನ್ ಕೃಷ್ಣಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಎ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಬ್ರಾಯ ಭಟ್, ಉದನೇಶವೀರ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ವಿಷ್ಣು ಪ್ರಕಾಶ್ ಪೆರ್ವ, ಮಾತೃ ಸಂಘದ ಅಧ್ಯಕ್ಷೆ ಪ್ರೀತಾ ಕೆ, ಶುಭ ಹಾರೈಸಿದರು. ಶಾಲಾ ಅಧ್ಯಾಪಕ ಅಧ್ಯಾಪಿಕೆಯರು ಶಾಲಾ ಮಕ್ಕಳು ಹಳೆವಿದ್ಯಾರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

0 Comments