ಕುಂಬಳೆ : ಕುಂಬಳೆ ವಲಯದ ಕಳತ್ತೂರು–ಕಿದೂರು ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕಿದೂರು ಶ್ರೀ ಮಹಾದೇವ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಸಿಬ್ಬಂದಿ ಮಹಾಲಿಂಗೇಶ್ವರ ಶರ್ಮ, ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಪುಣಿಯೂರು ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು. ದೇವಸ್ಥಾನದ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಹಾಗೂ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು.

0 Comments