ಆಲಪ್ಪುಳ : ಆಲಪ್ಪುಳದ ಪುನ್ನಮಾಡ ಸರೋವರದಲ್ಲಿ ನಡೆಯುತ್ತಿರುವ 72ನೇ ನೆಹರು ಟ್ರೋಫಿ ದೋಣಿ ಸ್ಪರ್ಧೆಗೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಚಾಲನೆ ನೀಡಿದರು.
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಗೃಹ ಸಚಿವ ರಮೇಶ್ ಚೆನ್ನಿತ್ತಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಕೆ.ಸಿ. ವೇಣುಗೋಪಾಲ್ ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಚಿವ ಪಿ.ಸಿ. ವಿಷ್ಣುನಾಥ್ ಧ್ವಜಾರೋಹಣ ನೆರವೇರಿಸಿದರು. 22 ಚುಂಡನ್ ದೋಣಿಗಳು ಸೇರಿದಂತೆ ಒಟ್ಟು 71 ದೋಣಿಗಳು ಪುನ್ನಮಾಡ ಸರೋವರದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿವೆ.
.jpeg)
0 Comments