Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

‘ರಬ್ಬರ್ ಬೆಲೆಯನ್ನು 300 ರೂ.ಗೆ ಏರಿಸಲಾಗುವುದು : ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೊಚ್ಚಿ : ರಾಜ್ಯದಲ್ಲಿ ರಬ್ಬರ್ ಬೆಲೆಯನ್ನು ಕೆ.ಜಿ.ಗೆ 300 ರೂ. ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ಹೇಳಿದ್ದಾರೆ. ರಬ್ಬರ್ ಬೆಲೆ ರೂ. 300 ತಲುಪುವ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ 200–250ಕ್ಕೆ ಏರಿಸಲು ಕ್ರಮ ಕೈಗೊಂಡಿದ್ದರೆ, ಮುಂದಿನ ಹಂತದಲ್ಲಿ ರೂ. 300ಕ್ಕೆ ತಲುಪಿಸುವ ಪ್ರಯತ್ನವೂ ನಡೆಯಲಿದೆ ಎಂದರು.

ಸರ್ಕಾರದ ಆದ್ಯತಾ ಪಟ್ಟಿಯಲ್ಲಿ ರೈತರಿಗೆ ಪ್ರಮುಖ ಸ್ಥಾನವಿದೆ ಎಂದರು. ವನ್ಯಜೀವಿಗಳ ದಾಳಿಯನ್ನು ತಡೆಯಲು ಬಲವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಪುರಾತನ ಹಾಗೂ ಆಧುನಿಕ ತಂತ್ರಜ್ಞಾನಗಳನ್ನು ಸಂಯೋಜಿಸಿ ಸೂಕ್ತ ವ್ಯವಸ್ಥೆ ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲಾಗುವುದು. ಅಗತ್ಯ ಭೂ ಕಾನೂನು ತಿದ್ದುಪಡಿಗಳನ್ನು ಜಾರಿಗೆ ತರಲಾಗುವುದು. ಭತ್ತದ ರೈತರಿಗೆ ಬಾಕಿ ಇರುವ ಹಣವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮುಚ್ಚಲ್ಪಟ್ಟಿರುವ ತೋಟಗಳನ್ನು ಮತ್ತೆ ಕಾರ್ಯನಿರ್ವಹಿಸುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಎರಡನೇ ಭೂ ಸುಧಾರಣಾ ಕ್ರಮ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ಹೇಳಿದರು.

Post a Comment

0 Comments

ಜಾಹೀರಾತು

Responsive Advertisement