Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪಶ್ಚಿಮ ಬಂಗಾಳದ ನಾಲ್ಕು ಅಂತಸ್ತಿನ ಹೋಟೆಲ್‌ನ ಅಗ್ನಿ ಅನಾಹುತಕ್ಕೆ ಏಳು ಯಾತ್ರಿಕರು ಬಲಿ

ಪಶ್ಚಿಮ ಬಂಗಾಳ :  ಬಿರ್ಭುಮ್ ಜಿಲ್ಲೆಯ ಹೋಟೆಲ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು,  ಗಾಯಾಳುಗಳನ್ನು ರಾಂಪುರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವಾಲಯ ನಗರಿಯಾದ ತಾರಾಪೀಠದ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪ್ರಸಿದ್ಧ ಕಾಳಿ ದೇವಸ್ಥಾನಕ್ಕೆ ತೀರ್ಥಯಾತ್ರೆಗೆ ಬಂದಿದ್ದ ಜನರು ಹೋಟೆಲ್‌ನಲ್ಲಿ ತಂಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡಾಗ ಹೋಟೆಲ್‌ನಲ್ಲಿದ್ದ ಜನರು ನಿದ್ರಿಸುತ್ತಿದ್ದರು.

ಮಾಹಿತಿ ಪಡೆದ ಅಗ್ನಿಶಾಮಕ ದಳದ ಎರಡು ಘಟಕಗಳು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಲು ಪ್ರಯತ್ನಿಸಿದವು. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಆರಂಭಿಕ ತೀರ್ಮಾನ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Post a Comment

0 Comments

ಜಾಹೀರಾತು

Responsive Advertisement