ಪಳ್ಳಿಕ್ಕೆರೆ : ತಾಯಿಗೆ ಮರದ ದೊಣ್ಣೆಯಿಂದ ಹಲ್ಲೆ ನಡೆಸಿ, ತಲೆಗೆ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮಗನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಪಳ್ಳಿಕ್ಕೆರೆ ಉಸ್ಮಾನಿಯಾ ನಗರದ ರಹ್ನಾಬಿ ನೀಡಿದ ದೂರಿನ ಆಧಾರದ ಮೇಲೆ ಅವರ ಪುತ್ರ ಇರ್ಷಾದ್ (31)ನನ್ನು ಪೊಲೀಸರು ಬಂಧಿಸಿದ್ದಾರೆ. ಇರ್ಷಾದ್ ಮರದ ದೊಣ್ಣೆಯಿಂದ ಹಲ್ಲೆ ನಡೆಸಿ ತಾಯಿಗೆ ಗಾಯಗೊಳಿಸಿದ್ದು, ಬಳಿಕ ತಲೆಗೆ ಹೊಡೆದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

0 Comments