ಕಾಸರಗೋಡು : ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಬೇವಿಂಜೆ ಸಮೀಪದ ತೆಕ್ಕಿಲ್ ಬಳಿ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು.
ಮರವು ವಿದ್ಯುತ್ ತಂತಿಗಳ ಮೇಲೂ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಸ್ಥಳೀಯ ನಿವಾಸಿಗಳು ಈ ಬಗ್ಗೆ ಕಾಸರಗೋಡು ಅಗ್ನಿಶಾಮಕ ಕೇಂದ್ರಕ್ಕೆ ಮಾಹಿತಿ ನೀಡಿದ ಬಳಿಕ, ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿದರು.
ಅಗ್ನಿಶಾಮಕ ದಳದ ಲೀಡಿಂಗ್ ಫೈರ್ಮ್ಯಾನ್ ಸುಕು ವಿ.ಅವರ ನೇತೃತ್ವದಲ್ಲಿ ಎಫ್ಆರ್ಒ ಅಭಿಲಾಷ್ ಎಸ್., ಜಿಜೋ ಜೆ.ಬಿ., ಅಶ್ವಿನ್ ಎಸ್.ಎಂ. ಹಾಗೂ ಎಫ್ಆರ್ಒ (ಡಿ) ಪ್ರಜಿತ್ ಓ.ಕೆ. ಅವರ ತಂಡ ಕಾರ್ಯಾಚರಣೆ ನಡೆಸಿ ಮರವನ್ನು ಕತ್ತರಿಸಿ ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃಸ್ಥಾಪಿಸಿತು.

0 Comments