ಮಂಗಳೂರು : ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಸಭೆಗೆ ಅಗತ್ಯವಿರುವ ಸ್ಥಳಾವಕಾಶ, ಪಾರ್ಕಿಂಗ್, ಭದ್ರತೆ ಹಾಗೂ ಸಂಚಾರ ನಿಯಂತ್ರಣ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಸಚಿವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಎಡಿಸಿ ರಾಜು ಮತ್ತಿತರರು ಉಪಸ್ಥಿತರಿದ್ದರು.


0 Comments